ತೆಲಂಗಾಣ, ಆಂಧ್ರ ಪ್ರದೇಶದ (Andhra Pradesh) ತೆಲುಗು ರಾಜ್ಯಗಳಲ್ಲಿ ಈ ಸುದ್ದಿ ಸಂಚಲನ ಸೃಷ್ಟಿಸಿದೆ. ಈಗಾಗಲೇ, ದೇಶದ ಅತ್ಯಂತ ಯಶಸ್ವಿ ರಾಜಕೀಯ ತಂತ್ರಜ್ಞ ಹಾಗೂ ರಾಜಕಾರಣಿ ಪ್ರಶಾಂತ್ ಕಿಶೋರ್ ಜೊತೆ ರಹಸ್ಯವಾಗಿ ಸಮಾಲೋಚನೆ ನಡೆಸಿದ್ದಾರೆ ಅಂತಲೂ ತಿಳಿದು ಬಂದಿದೆ. ಪುಷ್ಪ-2 ವೇಳೆ ತೆಲಂಗಾಣ ಕಾಂಗ್ರೆಸ್ ಸರ್ಕಾರದ ಜೊತೆ ಉಂಟಾದ ವಿವಾದಗಳಿಂದಾಗಿ ರೇವಂತ್ ರೆಡ್ಡಿ ಸರ್ಕಾರವನ್ನ ಗುರಿಯಾಗಿಸಿಕೊಂಡು ತೆಲಂಗಾಣದಲ್ಲಿ ರಾಜಕೀಯಕ್ಕೆ (Politics) ಇಳಿಯುತ್ತಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನೂ, ಹೈದರಾಬಾದ್, ನಿಜಾಮಾಬಾದ್ ಮತ್ತು ಖಮ್ಮಮ್ ನಂತಹ ಕಡೆಗಳಲ್ಲಿ ಅವರಿಗೆ ಇರುವ ದೊಡ್ಡ ಅಭಿಮಾನಿ ಬಳಗವೇ ಅವರಿಗೆ ಪ್ಲಸ್ ಆಗುತ್ತದೆ ಎಂಬ ವಾದ ಎದ್ದಿದೆ. ಆದರೆ, ಆಂಧ್ರ ಪ್ರದೇಶವನ್ನೇ ಆಯ್ಕೆ ಮಾಡಿಕೊಳ್ಳಬಹುದು ಎಂದು ಅಭಿಪ್ರಾಯ ಪಡುತ್ತಿದ್ದಾರೆ. ಯಾಕಂದ್ರೆ, ಆಂಧ್ರದಲ್ಲಿ ಅಲ್ಲು ಅರ್ಜುನ್ ಅವರ ಕಾಪು ಸಮುದಾಯದ ಗಟ್ಟಿ ಮತಬ್ಯಾಂಕ್ ಇದೆ. ಈ ಎಲ್ಲಾ ಊಹಾಪೋಹಗಳ ನಡುವೆ, ಅಲ್ಲು ಅರ್ಜುನ್ ಟೀಮ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಅಲ್ಲು ಅರ್ಜುನ್ ಅವರ ಗಮನ ಸಂಪೂರ್ಣವಾಗಿ ಸಿನಿಮಾಗಳ ಮೇಲೆ ಮಾತ್ರ ಇದೆ ಎಂದು ಹೇಳಿದೆ.
Pushpa The Rule | ದಳಪತಿ ರೀತಿ ರಾಜಕೀಯಕ್ಕೆ ಬರ್ತಾರಾ ಅಲ್ಲು ಅರ್ಜುನ್?
Kaverinews
|
Published on:
|
Views: 37
ಸಿನಿಮಾ